ಶರಣು ನಿಮಗೆ ಶರಣು, ನಮ್ಮ ಮಂತ್ರ ಪಠಣ ನೀವು
ಪ್ರತಿ ವರ್ಷದ ಏಪ್ರಿಲ್ 14ರಂದು ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ, ಪರಿ ತನ್ನ 'ಗ್ರೈಂಡ್ಮಿಲ್ ಸಾಂಗ್ಸ್ ಪ್ರಾಜೆಕ್ಟ್' ಅಡಿಯಲ್ಲಿ ಈ ತಿಂಗಳು ಪೂರ್ತಿ ಡಾ.ಅಂಬೇಡ್ಕರ್ ಮತ್ತು ಜಾತಿ ವಿಷಯಗಳ ಆಧಾರದ ಮೇಲೆ ಕಟ್ಟಲ್ಪಟ್ಟಿರುವ ಜಾನಪದ ಗೀತೆಗಳನ್ನು ಹಂಚಿಕೊಳ್ಳಲಿದೆ. ಈ ಸರಣಿಯ ಮೊದಲ ಕಂತಿನಲ್ಲಿ, ನಾವು ಬುದ್ಧ, ಭೀಮರಾವ್ ಅಂಬೇಡ್ಕರ್, ಧಮ್ಮ, ಸಂಘ ಮತ್ತು ರಮಾಬಾಯಿಯವರನ್ನು ಆಧರಿಸಿ ಹಾಡಲಾಗಿರುವ ಓವಿಯನ್ನು (ಬೀಸುಕಲ್ಲಿನ ಪದಗಳು) ಸಾವರ್ಗಾಂವ್ನ ರಾಧಾಬಾಯಿ ಬೋರ್ಡೆಯವರ ಕಂಠದಲ್ಲಿ ನಿಮಗಾಗಿ ತಂದಿದ್ದೇವೆ














