ನಿಜವಾದ ಪ್ರಶ್ನೆ ಮೌಲ್ಯಗಳ ಕುರಿತಾಗಿದೆ. ಮತ್ತು ಈ ಮೌಲ್ಯಗಳು ನಮ್ಮ ಜೀವನದ ಒಂದು ಭಾಗ. ನಾವು ನಮ್ಮನ್ನು ಪ್ರಕೃತಿಯೊಂದಿಗೆ ಒಂದಾಗಿ ನೋಡುತ್ತೇವೆ. ಆದಿವಾಸಿಗಳು ಹೋರಾಡುವಾಗ, ಸರ್ಕಾರ ಅಥವಾ ನಿಗಮದ ವಿರುದ್ಧ ಹೋರಾಡುವುದಿಲ್ಲ. ಅವರು ತಮ್ಮದೇ ʼ ಭೂಮಿ ಸೇನಾ'ವನ್ನು ಹೊಂದಿದ್ದಾರೆ, ಮತ್ತು ಅವರು ದುರಾಸೆ ಮತ್ತು ಸ್ವಾರ್ಥದಲ್ಲಿ ಬೇರೂರಿರುವ ಮೌಲ್ಯಗಳ ವಿರುದ್ಧ ಹೋರಾಡುತ್ತಾರೆ.

ಇದು ನಾಗರಿಕತೆಯ ಬೆಳವಣಿಗೆಯೊಂದಿಗೆ ಪ್ರಾರಂಭವಾಯಿತು - ನಾವು ವ್ಯಕ್ತಿವಾದದ ಉದಯವನ್ನು ನೋಡಲು ಪ್ರಾರಂಭಿಸಿದಾಗ, ಮನುಷ್ಯನನ್ನು ಪ್ರಕೃತಿಯಿಂದ ಪ್ರತ್ಯೇಕ ಘಟಕವಾಗಿ ನೋಡಲು ಪ್ರಾರಂಭಿಸಿದೆವು. ಅಲ್ಲಿಂದಲೇ ಸಂಘರ್ಷ ಪ್ರಾರಂಭವಾಯಿತು. ಒಮ್ಮೆ ನಾವು ನದಿಯಿಂದ ಬೇರ್ಪಟ್ಟ ನಂತರ, ನಮ್ಮ ಒಳಚರಂಡಿ ತ್ಯಾಜ್ಯ, ರಾಸಾಯನಿಕ ಮತ್ತು ಕೈಗಾರಿಕಾ ತ್ಯಾಜ್ಯವನ್ನು ನೀರಿನಲ್ಲಿ ಸೇರಿಸಲು ನಾವು ಹಿಂಜರಿಯುವುದಿಲ್ಲ.  ನಾವು  ನದಿಯನ್ನು ಸಂಪನ್ಮೂಲವಾಗಿ ಹೊಂದಲು ಪ್ರಾರಂಭಿಸುತ್ತೇವೆ. ಒಮ್ಮೆ ನಾವು ನಮ್ಮನ್ನು ಪ್ರಕೃತಿಯಿಂದ ಪ್ರತ್ಯೇಕ ಮತ್ತು ಶ್ರೇಷ್ಠ ಎಂದು ಭಾವಿಸಿದರೆ, ಅದನ್ನು ಕೊಳ್ಳೆ ಹೊಡೆಯುವುದು ಮತ್ತು ಶೋಷಿಸುವುದು ಸುಲಭ. ಮತ್ತೊಂದೆಡೆ, ಆದಿವಾಸಿ ಸಮುದಾಯದ ಮೌಲ್ಯಗಳು ಕೇವಲ ಕೇವಲ ಕಾಗದದ ಮೇಲೆ ಬರೆಯಲಾದ ಮೌಲ್ಯಗಳಲ್ಲ. ನಮ್ಮ ಮೌಲ್ಯಗಳು ನಮ್ಮ ಜೀವನ ವಿಧಾನ.

ಜಿತೇಂದ್ರ ವಾಸವ ದೆ ಹ್ವಾಲಿ ಭಿಲಿಯ ಭಾಷೆಯ ಲ್ಲಿ ತಮ್ಮ ಕವಿತೆ ಓದುವುದ ನ್ನು ಆಲಿಸಿ

ಪ್ರತಿಷ್ಠಾ ಪಾಂಡ್ಯ ಅವರು ಇಂಗ್ಲಿಷ್ ಭಾಷಾಂತರದಲ್ಲಿ ಕವಿತೆ ಓದುವುದನ್ನು ಆಲಿಸಿ

ನಾನೊಂದು ಭೂಮಿಯ ಭ್ರೂಣ

ನಾನು ಭೂಮಿಯ ಬೇರು-ಬೀಜ-ಭ್ರೂಣ
ನಾನು ಸೂರ್ಯ, ಭಾವ, ಶಾಖದ ಪ್ರಜ್ಞೆ, ಅನಂತ
ನನ್ನ ಹೆಸರು ಭಿಲ್, ಮುಂಡಾ, ಬೋಡೋ, ಗೊಂಡ್, ಸಂತಾಲ್.
ನಾನು ಯುಗಯುಗಗಳ ಹಿಂದೆ ಜನಿಸಿದ ಮೊದಲ ಮಾನವ
ನೀವು ನನ್ನನ್ನು ಬದುಕುತ್ತೀರಿ,
ನನ್ನನ್ನು ಪೂರ್ಣವಾಗಿ ಬದುಕಿ
ನಾನು ಈ ಭೂಮಿಯ ಮೇಲಿನ ಸ್ವರ್ಗ
ನಾನು ಭೂಮಿಯ ಬೇರು-ಬೀಜ-ಭ್ರೂಣ
ನಾನು ಸೂರ್ಯ, ಭಾವ, ಶಾಖದ ಪ್ರಜ್ಞೆ, ಅನಂತ

ನನ್ನ ಹೆಸರು ಸಹ್ಯಾದ್ರಿ, ಸತ್ಪುರ, ವಿಂಧ್ಯ, ಅರಾವಳಿ
ನಾನು ಹಿಮಾಲಯದ ಶಿಖರ, ದಕ್ಷಿಣ ಸಮುದ್ರದ ಅಂಚು
ಮತ್ತು ಈಶಾನ್ಯದ ಪ್ರಕಾಶಮಾನವಾದ ಹಸಿರು ನಾನು.
ನೀವು ಎಲ್ಲಿ ಮರವನ್ನು ಕತ್ತರಿಸಿದರೂ, ನೀವು ಪರ್ವತವನ್ನು ಮಾರಾಟ ಮಾಡಿದರೂ
ನನ್ನನ್ನು ಹರಾಜು ಹಾಕುತ್ತಿರುತ್ತೀರಿ
ನೀವು ನದಿಯನ್ನು ಕೊಂದಾಗ ನಾನು ಸಾಯುತ್ತೇನೆ
ನಿಮ್ಮ ಉಸಿರಿನಲ್ಲಿಯೇ ನೀವು ನನ್ನನ್ನು ಉಸಿರಾಡುವಿರಿ.
ನಾನು ಜೀವಾಮೃತ.
ನಾನು ಭೂಮಿಯ ಬೇರು-ಬೀಜ-ಭ್ರೂಣವಾ
ನಾನು ಸೂರ್ಯ, ಭಾವ, ಶಾಖದ ಪ್ರಜ್ಞೆ, ಅನಂತ

ಅಷ್ಟಕ್ಕೂ, ನೀವು ನನ್ನ ಸಂತತಿ
ಮತ್ತು ನನ್ನ ರಕ್ತವೂ ಕೂಡ.
ಪ್ರಲೋಭನೆಗಳು, ದುರಾಸೆ ಮತ್ತು ಅಧಿಕಾರದ ಕರಾಳತೆ
ನಿಜವಾದ ಜಗತ್ತನ್ನು ನೋಡಲು ನಿಮಗೆ ಅವಕಾಶ ನೀಡುವುದಿಲ್ಲ.
ನೀವು ಭೂಮಿಯನ್ನು, ಭೂಮಿ ಎಂದು ಕರೆಯುತ್ತೀರಿ,
ನಾವು ಅವಳನ್ನು ತಾಯಿ ಎಂದು ಕರೆಯುತ್ತೇವೆ
ನೀವು ನದಿಯನ್ನು, ನದಿ ಎಂದು ಕರೆಯುತ್ತೀರಿ
ನಮಗೆ ಅವಳು ಸಹೋದರಿ
ಪರ್ವತಗಳು ನಿಮಗೆ ಕೇವಲ ಪರ್ವತಗಳು ಮಾತ್ರ
ನಾವು ಅವುಗಳನ್ನು ಸಹೋದರರೆನ್ನುತ್ತೇವೆ
ಸೂರ್ಯ ನಮ್ಮ ತಾತ.
ಮತ್ತು ಚಂದ್ರ ನಮ್ಮ ಸೋದರಮಾವ.
ಈ ಸಂಬಂಧಕ್ಕಾಗಿ
ನಾನು ಒಂದು ಗೆರೆಯನ್ನು ಎಳೆಯಬೇಕು
ನಿಮ್ಮ ಮತ್ತು ನನ್ನ ನಡುವೆ, ಎಂದು ಅವರು ಹೇಳುತ್ತಾರೆ.
ಆದರೆ ನಾನು ಅದನ್ನು ನಿರಾಕರಿಸುತ್ತೇನೆ. ನಾನು ನಂಬುತ್ತೇನೆ
ನಿಮ್ಮಷ್ಟಕ್ಕೆ ನೀವೇ ಕರಗಿಹೋಗುವಿರಿ.
ನಾನು ಹಿಮವನ್ನು ಹೀರಿಕೊಳ್ಳುವ ಶಾಖ
ನಾನು ಭೂಮಿಯ ಬೇರು-ಬೀಜ-ಭ್ರೂಣ
ನಾನು ಸೂರ್ಯ, ನಾನು ಭಾವ, ಮತ್ತು ನಾನು ಅನಂತ ಶಾಖದ ಪ್ರಜ್ಞೆ

ಅನುವಾದ: ಶಂಕರ. ಎನ್. ಕೆಂಚನೂರು

Poem and Text : Jitendra Vasava

Jitendra Vasava is a poet from Mahupada village in Narmada district of Gujarat, who writes in Dehwali Bhili language. He is the founder president of Adivasi Sahitya Academy (2014), and an editor of Lakhara, a poetry magazine dedicated to tribal voices. He has also published four books on Adivasi oral literature. His doctoral research focused on the cultural and mythological aspects of oral folk tales of the Bhils of Narmada district. The poems by him published on PARI are from his upcoming and first collection of poetry.

Other stories by Jitendra Vasava
Illustration : Labani Jangi

Labani Jangi is a 2020 PARI Fellow, and a self-taught painter based in West Bengal's Nadia district. She is working towards a PhD on labour migrations at the Centre for Studies in Social Sciences, Kolkata.

Other stories by Labani Jangi
Translator : Shankar N. Kenchanuru

Shankar N. Kenchanur is a poet and freelance translator. He can be reached at [email protected].

Other stories by Shankar N. Kenchanuru