ಈ ವರ್ಷ, ಜುಲೈನಲ್ಲಿ ಪ್ರವಾಹಕ್ಕೆ ಕಾರಣವಾದ ಹಲವಾರು ದಿನಗಳ ಮಳೆಯ ನಂತರ, 25,000ಕ್ಕೂ ಹೆಚ್ಚು ಜನರು ನೇರವಾಗಿ ಅಥವಾ ಪರೋಕ್ಷವಾಗಿ ಬಾಧಿತರಾಗಿದ್ದಾರೆ ಎಂದು ಪಿಐಎಲ್ ಅರ್ಜಿಯಲ್ಲಿ ಹೇಳಲಾಗಿದೆ. ಯಮುನಾ ನದಿ ಯೋಜನೆ: ನವದೆಹಲಿ ನಗರ ಪರಿಸರ ವಿಜ್ಞಾನದ ಪ್ರಕಾರ, ಪ್ರವಾಹ ಪ್ರದೇಶದ ನಿರಂತರ ಅತಿಕ್ರಮಣವು ತೀವ್ರ ಪರಿಣಾಮಗಳನ್ನು ಬೀರುತ್ತದೆ, "... ಪ್ರವಾಹ ಪ್ರದೇಶದ ತಗ್ಗು ಪ್ರದೇಶಗಳಲ್ಲಿ ನಿರ್ಮಿಸಲಾದ ಕಟ್ಟಡಗಳನ್ನು ಅಳಿಸಿಹಾಕುವುದರ ಜೊತೆಗೆ ಪೂರ್ವ ದೆಹಲಿಯನ್ನು ನೀರಿನಿಂದ ಮುಳುಗಿಸುತ್ತದೆ.”
ಯಮುನಾ ದಡದಲ್ಲಿನ ಸುಮಾರು 24,000 ಎಕರೆ ಪ್ರದೇಶದಲ್ಲಿ ಕೃಷಿ ಮಾಡಲಾಗಿದೆ ಮತ್ತು ರೈತರು ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ಇಲ್ಲಿ ಕೃಷಿ ಮಾಡುತ್ತಿದ್ದಾರೆ. ಆದರೆ ದೇವಾಲಯ, ಮೆಟ್ರೋ ನಿಲ್ದಾಣ, ಕಾಮನ್ವೆಲ್ತ್ ಗೇಮ್ಸ್ ವಿಲೇಜ್ (ಸಿಡಬ್ಲ್ಯೂಜಿ) - ಪ್ರವಾಹ ಪ್ರದೇಶಗಳ ಕಾಂಕ್ರೀಟೀಕರಣವು ಪ್ರವಾಹದ ನೀರು ನೆಲೆಗೊಳ್ಳಬೇಕಿದ್ದ ಜಾಗವನ್ನು ಆಕ್ರಮಿಸಿಕೊಂಡಿವೆ. ಓದಿ: ದೊಡ್ಡ ನಗರ, ಚಿಕ್ಕ ರೈತರು ಹಾಗೂ ಅವಸಾನದಂಚಿನಲ್ಲಿರುವ ನದಿ
"ನಾವು ಏನೇ ಮಾಡಿದರೂ ಪ್ರಕೃತಿ ತನ್ನ ಹಾದಿಯನ್ನು ತಾನೇ ನಿರ್ಧರಿಸುತ್ತದೆ. ಈ ಹಿಂದೆ ಮಳೆ ಮತ್ತು ಪ್ರವಾಹದ ಸಮಯದಲ್ಲಿ ನೀರು ಹರಡಿಕೊಳ್ಳುತ್ತಿತ್ತು, ಮತ್ತು ಈಗ [ಪ್ರವಾಹ ಪ್ರದೇಶಗಳಲ್ಲಿ] ಕಡಿಮೆ ಸ್ಥಳಾವಕಾಶವಿರುವುದರಿಂದ, ಅದು ಹರಿಯಲು ತನ್ನ ಮಟ್ಟವನ್ನು ಏರಿಸಿಕೊಳ್ಳಬೇಕಾಯಿತು, ಮತ್ತು ಈ ಪ್ರಕ್ರಿಯೆಯಲ್ಲಿ ಅದು ನಮ್ಮನ್ನು ನಾಶಪಡಿಸಿತು" ಎಂದು 2023ರ ಪ್ರವಾಹಕ್ಕೆ ಬೆಲೆ ತೆರುತ್ತಿರುವ ಬೇಲಾ ಎಸ್ಟೇಟಿನ ಕಮಲ್ ಹೇಳಿದರು. "ಸಾಫ್ ಕರ್ನಿ ಥೀ ಯಮುನಾ, ಲೇಕಿನ್ ಹಮೇ ಹಿ ಸಾಫ್ ಕಾರ್ ದಿಯಾ [ಅವರು ಯಮುನಾವನ್ನು ಸ್ವಚ್ಛಗೊಳಿಸಬೇಕಾಗಿತ್ತು ಅದರ ಬದಲಿಗೆ ನಮ್ಮನ್ನು ಸ್ವಚ್ಛಗೊಳಿಸಿದರು]!"
"ಯಮುನಾ ಕೆ ಕಿನಾರೆ ವಿಕಾಸ್ ನಹೀಂ ಕರ್ನಾ ಚಾಹಿಯೇ. ಯೇ ಡೂಬ್ ಕ್ಷೇತ್ರ್ ಘೋಷಿತ್ ಹೈ. ಸಿಡಬ್ಲ್ಯೂಜಿ, ಅಕ್ಷರಧಾಮ, ಮೆಟ್ರೋ ಯೇ ಸಬ್ ಪ್ರಕೃತಿ ಕೆ ಸಾಥ್ ಖಿಲ್ವಾದ್ ಹೈ. ಪ್ರಕೃತಿ ಕೋ ಜಿತ್ನಿ ಜಗಹ್ ಚಾಹಿಯೆ, ವೋಹ್ ತೋ ಲೆಗಿ. ಪಹ್ಲೆ ಪಾನಿ ಫೇಲ್ಕೆ ಜಟಾ ಥಾ, ಔರ್ ಅಬ್ ಕ್ಯುಂಕಿ ಜಗಹ್ ಕಾಮ್ ಹೈ, ತೋಹ್ ಉತ್ ಕೆ ಜ ರಹಾ ಹೈ, ಜಿಸ್ಕಿ ವಾಜಾ ಸೆ ನುಕ್ಸಾನ್ ಹುಮೇನ್ ಹುವಾ ಹೈ [ಯಮುನಾಗೆ ಹತ್ತಿರವಿರುವ ಪ್ರವಾಹ ಪ್ರದೇಶಗಳ ಪ್ರದೇಶವನ್ನು ಅಭಿವೃದ್ಧಿಪಡಿಸಬಾರದು. ಇದನ್ನು ಈಗಾಗಲೇ ಪ್ರವಾಹ ಪೀಡಿತ ಪ್ರದೇಶವೆಂದು ಗೊತ್ತುಪಡಿಸಲಾಗಿದೆ. ಪ್ರವಾಹ ಪ್ರದೇಶದಲ್ಲಿ ಕಾಮನ್ವೆಲ್ತ್ ಗೇಮ್ಸ್, ಅಕ್ಷರಧಾಮ ದೇವಾಲಯ, ಮೆಟ್ರೋ ನಿಲ್ದಾಣವನ್ನು ನಿರ್ಮಿಸುವುದು ಪ್ರಕೃತಿಯೊಂದಿಗೆ ಆಟವಾಡಿದಂತೆ" ಎಂದು ಕಮಲ್ ಹೇಳುತ್ತಾರೆ.
"ದಿಲ್ಲಿ ಕೋ ಕಿಸ್ನೆ ಡುಬಾಯಾ [ದೆಹಲಿಯನ್ನು ಮುಳುಗಿಸಿದವರು ಯಾರು]? ದೆಹಲಿ ಸರ್ಕಾರದ ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಇಲಾಖೆ ಪ್ರತಿ ವರ್ಷ ಜೂನ್ 15-25ರ ನಡುವೆ ಸಿದ್ಧತೆ ನಡೆಸಬೇಕಾಗಿತ್ತು. ಅವರು ಬ್ಯಾರೇಜ್ ಗೇಟುಗಳನ್ನು [ಸಮಯಕ್ಕೆ ಸರಿಯಾಗಿ] ತೆರೆದಿದ್ದರೆ, ನೀರು ಈ ರೀತಿ ಪ್ರವಾಹಕ್ಕೆ ಒಳಗಾಗುತ್ತಿರಲಿಲ್ಲ. ಪಾನಿ ನ್ಯಾಯ ಮಾಂಗ್ನೆ ಸುಪ್ರೀಂ ಕೋರ್ಟ್ ಗಯಾ [ನ್ಯಾಯ ಕೇಳಲು ನೀರು ಸುಪ್ರೀಂ ಕೋರ್ಟ್ ತಲುಪಿತು]" ಎಂದು ರಾಜೇಂದ್ರ ಸಿಂಗ್ ಹೇಳಿದ್ದು ತಮಾಷೆಗಲ್ಲ.